ಮಂಗಳೂರು

ಮಾಂಸ ವ್ಯಾಪಾರಸ್ಥರ ಸಂಘದಿಂದ ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

  • Published in ಮಂಗಳೂರು
  • Read 38 times
  • Comments::DISQUS_COMMENTS
ಮಂಗಳೂರು: ಶಿಕ್ಷಣದಲ್ಲಿ ಡೋನೇಶನ್ ಹಾವಳಿಯ ಈ ದಿನಗಳಲ್ಲಿ ಬಡಞ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಮತ್ತು ಶಿಕ್ಷಣ ಪರಿಕರಗಳನ್ನು ನೀಡಿ ದ.ಕ. ಜಿಲ್ಲಾ ಮಾಂಸ ವ್ಯಾಪಾರಸ್ಥರ ಸಂಘದ ಕೆಲಸ ಶ್ಲಾಘನೀಯ ಎಂದು ಬಂದರ್ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟಕ್ ಶಾಂತಾರಾಮ್ ತಿಳಿಸಿದ್ದಾರೆ.   
  
  
   
  
  
  
  
  
ಜಮೀಯತುಲ್ ಸಅದ ಮಾಂಸ ವ್ಯಾಪಾರಸ್ಥರ ಸಂಘದ ವತಿಯಿಂದ ಕುದ್ರೋಳಿಯ ಏವನ್ ಬಾಗ್‍ನಲ್ಲಿ ಆಯೋಜಿಸಲಾಗಿದ್ದ ಉಚಿತ ಪುಸ್ತಕ ವಿತರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಾಂಸ ವ್ಯಾಪಾರಸ್ಥರ ಸಂಘದ ರಾಜ್ಯಾಧ್ಯಕ್ಷ ಅಲಿಹಸನ್ ಮಾತನಾಡಿ ಸಂಘಟನೆಯ ವತಿಯಿಂದ ಈ ಬಾರಿ 2.6ಲಕ್ಷ ರೂ. ವೆಚ್ಚದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಸಂಘಟನೆಯ ಅಧ್ಯಕ್ಷ ಜೆ. ಅಬ್ದುಲ್ ಖಾದರ್, ಪ್ರಮುಖರಾದ ಶಫುದ್ದೀನ್, ಅಬ್ದುಲ್ ರಹ್‍ಮಾನ್ ಉಪಸ್ಥಿತರಿದ್ದರು.
More in this category: « ಮಾಂಸ ವ್ಯಾಪಾರಸ್ಥರ ಸಂಘದಿಂದ ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮಂಗಳೂರು ಮುಖ್ಯ ನ್ಯಾಯಾಲಯ ಸಂಕೀರ್ಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ದಿಗೆ ಅನುದಾನ »
Tweet