Menu

ಶ್ರೀ ರಾಮ ನಾಮ ತಾರಕ ಮಂತ್ರ ಏಕಾಹ

  • Published in ಉಡುಪಿ
  • Read 36 times
  • Comments::DISQUS_COMMENTS
ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ದಶಮಾನೋತ್ಸವ ಸಮಾರೋಪ ಸಮಾರಂಭ ಪ್ರಯುಕ್ತ ಗುರುವಾರ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಶ್ರೀ ರಾಮದೇವ ವೀರವಿಠಲ ದೇವರ ಸನ್ನಿಧಾನದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಏಕಾಹ ಜರಗಿತು.
 
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಶ್ರೀ ಕೈವಲ್ಯ ಮಠಾಧೀಶ ಶ್ರೀಮದ್ ಶಿವಾನಂದ ಸರಸ್ವತಿ ತೀರ್ಥ ಸ್ವಾಮೀಜಿಯವರು ಶ್ರೀ ರಾಮ ನಾಮ ತಾರಕ ಮಂತ್ರ ಏಕಾಹ ಉದ್ಘಾಟಿಸಿ ಆಶೀರ್ವಚನ ನೀಡಿದರು.

ದೇವಳದ ಆಡಳಿತ ಮೊಕ್ತೇಸರ ಬೈಲೂರು ಮಂಜುನಾಥ ಶೆಣೈ, ಗಂಗೊಳ್ಳಿ ಶ್ರೀ ವಿಠಲ ರುಕುಮಾಯಿ ತಥಾ ಮುಖ್ಯ ಪ್ರಾಣ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಕಾಶೀನಾಥ ಪೈ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ವೇದಮೂರ್ತಿ ಜಿ.ವೇದವ್ಯಾಸ ಆಚಾರ್ಯ, ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ, ಸತೀಶ ಎಂ.ನಾಯಕ್ ನಾಡ, ನಿನಾದ ಸಂಸ್ಥೆಯ ಪದಾಧಿಕಾರಿಗಳು, ದೇವಳದ ಆಡಳಿತ ಮಂಡಳಿ ಸದಸ್ಯರು ಹಾಗೂ ಊರಿನ ಪರ ಊರಿನ ಭಜಕರು, ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.
 
ಗುರುವಾರ ಬೆಳಿಗ್ಗೆ ಆರಂಭಗೊಂಡ ಶ್ರೀ ರಾಮ ನಾಮ ತಾರಕ ಮಂತ್ರ ಏಕಾಹವು ಶುಕ್ರವಾರ ಬೆಳಿಗ್ಗೆ ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು.
More in this category: « ಮದುವೆ ಮನೆಯಲ್ಲಿ ಹೈಡ್ರಾಮ: ಎರಡನೇ ಮದುವೆ ನಿಲ್ಲಿಸಿದ ಪತ್ನಿ: ವಧುವಿಗೆ ಲೈಫ್ ಕೊಟ್ಟ ಯುವಕ ಮಲ್ಯರಮಠದಲ್ಲಿ ಸ್ಮಾರಕ ಕೊಠಡಿ ಉದ್ಘಾಟನೆ »
back to top